ದಿನ ಭವಿಷ್ಯ

21-07-2025

Jul 21, 2025 - 03:00
ದಿನ ಭವಿಷ್ಯ

ಅದೃಷ್ಟ ಸಂಖ್ಯೆ  3

ಮೇಷ:

   ಸರಳ ವಿಧಾನದಲ್ಲಿ ಕಠಿನ ಸಮಸ್ಯೆ ನಿವಾರಣೆ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು.  ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸೇವಾಕ್ಷೇತ್ರಗಳಿಗೆ ಪ್ರವೇಶದಿಂದ ಕೀರ್ತಿ. ಗಣೇಶ ಪಂಚರತ್ನ, ಶಿವಕವಚ, ಶನಿಮಹಾತ್ಮೆ ಓದಿ.


 

೨.ವೃಷಭ:

  ಹೆಚ್ಚು ಶ್ರಮವಿಲ್ಲದೆ ಕಾರ್ಯಸಾಧನೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ  ಲಾಭ‌. ವ್ಯವಹಾರಾರ್ಥ ಊರೊಳಗೆ  ತಿರುಗಾಟ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೩ಮಿಥುನ:

  ವಿನಯ, ವಿಧೇಯತೆಯಿಂದ ಯಶಸ್ಸು. ಉದ್ಯಮಗಳ ಪಾಲಿಗೆ ಶುಭದಿನ. ಪ್ರಾಚೀನ ವಿದ್ಯೆಗಳ ಸಾಧನೆಯಲ್ಲಿ ಮುನ್ನಡೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನಕ್ಕೆ ಅನುಕೂಲ ವಾತಾವರಣ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣುವಿನ ಸಹಸ್ರನಾಮ, ನವಗ್ರಹ ಮಂಗಲಾಷ್ಟಕ ಓದಿ.

೪. ಕರ್ಕಾಟಕ:
  ಚೆನ್ನಾಗಿ ವಿಮರ್ಶಿಸಿ ಕಾರ್ಯಕ್ಕೆ ಹೊರಡಿ. ಸಣ್ಣ ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.


೫.ಸಿಂಹ:
    ಉದ್ಯೋಗ ಸ್ಥಾನದಲ್ಲಿ ವಿಶಿಷ್ಡ ಮನ್ನಣೆಯ  ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ವ್ಯವಹಾರ ಶುಭಪ್ರದ. ಉದ್ಯೋಗಸ್ಥ ಮಹಿಳೆಯರಿಗೆ ಶುಭದಿನ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೬.ಕನ್ಯಾ:

  ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ  ಉದ್ಯಮದಲ್ಲಿ  ನಿಧಾನ  ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

೭. ತುಲಾ:

  ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ದ್ವಿಚಕ್ರ ವಾಹನ ಚಾಲಕರು ಎಚ್ಚರ. ಮಹಿಳೆಯರ ನೇತೃತ್ವದ  ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ. ಗಣೇಶ ಪಂಚರತ್ನ, ದತ್ತಾತ್ರೇಯ ಸ್ತೋತ್ರ, ನವಗ್ರಹ ಕವಚ ಓದಿ.


೮.ವೃಶ್ಚಿಕ:

ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ. ಯಂತ್ರೋಪಕರಣ  ವ್ಯಾಪಾರಿಗಳಿಗೆ  ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.


೯.ಧನು:

  ಸಹೋದ್ಯೋಗಿಗಳಿಂದ ಪೂರ್ಣ ಸಹಕಾರ. ಕುಟುಂಬದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.  ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ. ಗಣೇಶ ಅಷ್ಟಕ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

೧೦.ಮಕರ:

ಚೆನ್ನಾಗಿ ಆಲೋಚಿಸಿ ಮುಂದಡಿಯಿಡಿ.  ವಸ್ತ್ರ,  ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ.  ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ. ಹಿರಿಯರ ಆರೋಗ್ಯದ ಕಾಳಜಿ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧. ಕುಂಭ:.
 ಸ್ವಂತ ವ್ಯವಹಾರಸ್ಥರಿಗೆ ಸುದಿನ.  ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ‌.  ಸಮಾಜ ಸೇವಾಕಾರ್ಯಗಳಿಗೆ  ಮತ್ತಷ್ಟು  ಅವಕಾಶಗಳು. ಟೈಲರಿಂಗ್, ಕರಕುಶಲ ಕೆಲಸ  ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.
ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

೧೨. ಮೀನ:

 ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ.   ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗ ಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ,ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.