ದಿನ ಭವಿಷ್ಯ

29-07-2025

Jul 29, 2025 - 03:00
ದಿನ ಭವಿಷ್ಯ


 
              ಜ್ಯೋತಿರ್ಮಯ
            ‌‌‌
ಅದೃಷ್ಟ ಸಂಖ್ಯೆ  2


೧.ಮೇಷ:

 ಶುಭ ಮಂಗಳವಾರದಂದು ಹೆಚ್ಚು ವ್ಯತ್ಯಾಸ ಇಲ್ಲದ ಪರಿಸ್ಥಿತಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯಮದಲ್ಲಿ   ಮಾಮೂಲು ಸ್ಥಿತ್ಯಂತರಗಳು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ  ಆರೋಗ್ಯದ ಕಡೆಗೆ ಗಮನ ಇರಲಿ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಬನ ಸ್ತೋತ್ರ, ಶನಿಮಹಾತ್ಮೆ ಓದಿ.

೨.ವೃಷಭ:

  ವರ್ಷದ ಮೊದಲ ಹಬ್ಬದ ಸಂಭ್ರಮ. ಉದ್ಯೋಗ ಸ್ಥಾನದಲ್ಲಿ ಉಲ್ಲಾಸದ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ದೂರದಲ್ಲಿರುವ ನೆಂಟರ ಆಗಮನ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೩. ಮಿಥುನ:

  ಹಿತಶತ್ರುಗಳ ಬಾಧೆ ಎದುರಿಸಲು ಸಿದ್ಧತೆ. ಉದ್ಯಮದಲ್ಲಿ  ಪ್ರಗತಿ ತೃಪ್ತಿಕರ. ನೆರೆಯ ರಾಜ್ಯದಲ್ಲಿರುವ ಬಂಧುಗಳ ಭೇಟಿ. ಸಂಗಾತಿಯ ಆರೋಗ್ಯ ಚೇತರಿಕೆ. ಕುಟುಂಬದ ಮನೆಯಲ್ಲಿ ಶಿಶು ಜನನ. ಗಣೇಶ ದ್ವಾದಶನಾಮ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ, ನವಗ್ರಹ ಮಂಗಲಾಷ್ಟಕ ಓದಿ.


೪.ಕರ್ಕಾಟಕ:

  ಉದ್ಯೋಗ ಸ್ಥಾನದಲ್ಲಿ ಹೊಸಬರ ಉಸ್ತುವಾರಿ. ಉದ್ಯಮದ ಉತ್ಪಾದನೆಗಳ ಬೇಡಿಕೆಯಲ್ಲಿ ಹಿನ್ನಡೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ  ವ್ಯವಹಾರದಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ. ಗಣಪತಿ ಅಥರ್ವಶೀರ್ಷ, ದೇವೀಸ್ತೋತ್ರ, ಗುರುಸ್ತೋತ್ರ ಓದಿ.


೫_ಸಿಂಹ:

 ಧೈರ್ಯ ಮತ್ತು  ಸಾಹಸ ಪ್ರವೃತ್ತಿಗೆ ಗೆಲುವು. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ  ಖರೀದಿ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಬಂಗಾರದ ಕೆಲಸ ಬಲ್ಲವರಿಗೆ ಬೇಡಿಕೆ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.


೬.ಕನ್ಯಾ:
 ತಕ್ಕಮಟ್ಟಿಗೆ ಶಾಂತಿ, ಸಮಾಧಾನದ ದಿನ. ತಮ್ಮ  ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೭ತುಲಾ:

 ಎಲ್ಲ ಸಮಸ್ಯೆಗಳೂ ಪರಿಹಾರ. ಉದ್ಯೋಗದಲ್ಲಿ ಉತ್ತಮ ಅವಕಾಶ. ಅಕಸ್ಮಾತ್ ಧನಾಗಮ.  ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ‌. ಗಣೇಶ ಅಷ್ಟಕ, ದುರ್ಗಾಸ್ತೋತ್ರ, ಹನುಮಾನ್ ಚಾಲೀಸಾ ಓದಿ.


೮.ವೃಶ್ಚಿಕ:

 ಸಂಪೂರ್ಣ ಸಹಜ ಸ್ಥಿತಿ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದಲ್ಲಿ   ಹೊಸ  ವಸ್ತುಗಳ ಉತ್ಪಾದನೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಗೃಹಿಣಿಯರ ಸ್ವಾವಲಂಬನೆ ಯೋಜನೆ  ಉನ್ನತ ಸ್ಥಿತಿಯಲ್ಲಿ.ಸಂಕಷ್ಟನಾಶನ ಗಣೇಶ ಸ್ತೋತ್ರ, ಸುಬ್ರಹ್ಮಣ್ಯ ಕವಚ, ನವಗ್ರಹ ಮಂಗಲಾಷ್ಟಕ ಓದಿ.

೯. ಧನು:

  ಉದ್ಯೋಗ ಸ್ಥಾನದಲ್ಲಿ ಸಹೋದ್ಯೋಗಿಗಳ ಸದ್ಭಾವನೆಗೆ ಒಳಗಾಗುವಿರಿ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ ಅನುಕೂಲ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಗುರುಸ್ತೋತ್ರ ಓದಿ.


೧೦. ಮಕರ:
  ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ. ಉದ್ಯೋಗಸ್ಥರಿಗೆ ಹೊಸ ವಿಭಾಗದಲ್ಲಿ ಕೆಲಸ‌. ಭೂಮಿ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನ ವ್ಯಾಪಾರಿಗಳಿಗೆ  ಅನುಕೂಲ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಗಣೇಶ ಕವಚ, ದಾರಿದ್ರ್ಯದಹನ ಶಿವಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧.ಕುಂಭ:

 ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆ. ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೂರದಲ್ಲಿರುವ ಬಂಧುಗಳ  ಆಗಮನ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ರೋತ್ರ, ಶನಿಮಹಾತ್ಮೆ ಓದಿ.

೧೨.ಮೀನ:

 ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ.  ಹಿರಿಯ ಬಂಧುಗಳ ಭೇಟಿ. ಅನ್ಯಸಮಾಜದ ವ್ಯಕ್ತಿಗಳಿಂದ  ಸಕಾಲಿಕ  ಸಹಾಯ.  ವ್ಯವಹಾರ ಸಂಬಂಧ ಗಣ್ಯ ವ್ಯಕ್ತಿಯ ಭೇಟಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.