ದಿನ ಭವಿಷ್ಯ
03-09-2025
ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 3
೧. ಮೇಷ:
ಸ್ವಲ್ಪ ಲಾಭ, ಸ್ವಲ್ಪ ನಷ್ಟದ ಅನುಭವ. ಉದ್ಯೋಗದಲ್ಲಿ ಕೊಂಚ ಅಹಿತದ ಸನ್ನಿವೇಶ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಅನಿರೀಕ್ಷಿತ ಲಾಭ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಲಾಭದಾಯಕ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಕವಚ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಶನಿಮಹಾತ್ಮೆ ಓದಿ
೨. ವೃಷಭ:
ಸರ್ವತೋಮುಖ ಅಭಿವೃದ್ಧಿಯ ಮುಂದುವರಿಕೆ. ಉದ್ಯೋಗಸ್ಥರಿಗೆ ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಉದ್ಯಮಗಳ ಬೆಳವಣಿಗೆ ಸ್ಥಿರ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸಂಸಾರದಲ್ಲಿ, ಪ್ರೀತಿ, ವಿಶ್ವಾಸ ಸಾಮರಸ್ಯವೃದ್ಧಿ. ಗಣೇಶ ದ್ವಾದಶಮಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೩. ಮಿಥುನ:
ಅನವಶ್ಯ ಆತಂಕಕ್ಕೆ ವಿದಾಯ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಲಭಿಸಿದ ಸಮಾಧಾನ. ಕೃಷಿ ಕ್ಷೇತ್ರದಲ್ಲಿ ನೂತನ ಪ್ರಯೋಗಗಳು ಯಶಸ್ವಿ. ಉದ್ಯಮಿಗಳಿಗೆ ಕೊಂಚ ಕಾಲದಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ. ಧಾರ್ಮಿಕ ಸಾಹಿತ್ಯ ಅಧ್ಯಯನ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.
೪. ಕರ್ಕಾಟಕ:
ವಿಶೇಷ ಪ್ರಯತ್ನದಿಂದ ವೃದ್ಧಿಯಾದ ಕಾರ್ಯಸಾಮರ್ಥ್ಯ. ಉದ್ಯೋಗ ಸ್ಥಾನದಲ್ಲಿ ಹೊಸ ಕಾರ್ಯಗಳ ನಿಯೋಜನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಪ್ರಾಪ್ತ ವಯಸ್ಕರಿಗೆ ಕಂಕಣ ಭಾಗ್ಯದ ಭರವಸೆ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ. ಸಂಕಷ್ಟನಾಶನ ಗಣೇಶ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.
೫. ಸಿಂಹ:
ಹೊಸ ಖಾತೆ ನಿರ್ವಹಣೆಗೆ ಮನಃಪೂರ್ವಕವಾಗಿ ಸಜ್ಜು. ಸರಕಾರಿ ನೌಕರರಿಗೆ ಸಮಾಧಾನದ ಭಾವನೆ. ಸ್ವೋದ್ಯೋಗಿ ಮಹಿಳೆಯರಿಗೆ ಸರ್ವತೋಮುಖ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಕುಟುಂಬದಲ್ಲಿ ಸರ್ವರಿಗೂ ಆರೋಗ್ಯ ವೃದ್ಧಿ. ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೬. ಕನ್ಯಾ:
ನಿಯೋಜಿತ ಕಾರ್ಯಗಳನ್ನು ಸಕಾಲದಲ್ಲಿ ಪೂರೈಸಿದ ಸಮಾಧಾನ.ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೭. ತುಲಾ:
ದೇಹಕ್ಕೆ ಉಂಟಾದ ತೊಂದರೆಯಿಂದ ಮುಕ್ತಿ. ಹೊಸಬರಿಗೆ ಕೆಲಸದಲ್ಲಿಮಾರ್ಗದರ್ಶನ ಮಾಡುವ ಅವಕಾಶ ಪ್ರಾಪ್ತಿ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಉಳಿದವರ ಆರೋಗ್ಯ ತಕ್ಕಮಟ್ಟಿಗೆ ಉತ್ತಮ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಆದಿತ್ಯ ಹೃದಯ ಓದಿ.
೮. ವೃಶ್ಚಿಕ:
ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ದಿನ. ಉದ್ಯೋಗ,ಉದ್ಯಮದಲ್ಲಿ ಸಾಧಿಸಿದ ಯಶಸ್ಸಿಗೆ ಪುರಸ್ಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆಯಿಂದ ಲಾಭ. ಲೇವಾದೇವಿ ಹಾಗೂ ಸಟ್ಟಾ ವ್ಯವಹಾರದಲ್ಲಿ ನಷ್ಟ. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಉತ್ತಮ. ಗಣೇಶ ತ್ರಿಶತಿ ಸ್ತೋತ್ರ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ತ ಓದಿ.
೯. ಧನು:
ಉದ್ಯೋಗ ಸ್ಥಾನದಲ್ಲಿ ನಿಯೋಜಿತ ಕಾರ್ಯಗಳು ಸಕಾಲದಲ್ಲಿ ಮುಕ್ತಾಯ. ಪಾಲುದಾರಿಕೆ ಉದ್ಯಮ ಆರಂಭ ಸನ್ನಿಹಿತ. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಬೆಳೆಗಳ ಪ್ರಯೋಗ ತೃಪ್ತಿಕರ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಆದಾಯ ಹೆಚ್ಚಳ. ಉತ್ತರದ ಕಡೆಯಿಂದ ಶುಭ ಸಮಾಚಾರ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಸುಬ್ರಹ್ಮಣ್ಯ ಕವಚ, ಶನಿಸ್ತೋತ್ರ ಓದಿ.
೧೦. ಮಕರ:
ಎಣಿಸಿದ್ದಕ್ಕಿಂತ ಸುಲಭವಾಗಿ ಸಾಧ್ಯವಾದ ಕಾರ್ಯ. ಉದ್ಯೋಗ ಸ್ಥಾನದಲ್ಲಿ ಮುಂದುವರಿದ ಒತ್ತಡ. ವೃತ್ತಿಪರರಿಗೆ ನಿಗದಿತ ಸಮಯಕ್ಕೆ ಕಾರ್ಯ ಮುಗಿಸುವ ತರಾತುರಿ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ವಿದ್ಯುತ್ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧. ಕುಂಭ:
ಕಿರಿಯ ಸಹೋದ್ಯೋಗಿಗಳ ಕಾರ್ಯೋತ್ಸಾಹದಿಂದ ಶೀಘ್ರ ಯಶಸ್ಸು. ಉದ್ಯಮದ ಉತ್ಪನ್ನಗಳಿಗೆ ಹೆಚ್ಚಿದ ಬೇಡಿಕೆ. ಯಂತ್ರೋಪಕರಣಗಳ ಖರೀದಿ ಗೃಹೋತ್ಪನ್ನಗಳಿಗೆ ಗ್ರಾಹಕರ ಮೆಚ್ಚುಗೆ. ಸಂಸಾರದಲ್ಲಿ ಪ್ರೀತಿ, ವಾತ್ಸಲ್ಯ, ಸಾಮರಸ್ಯ ವೃದ್ಧಿ.
ಗಣೇಶ ಪಂಚರತ್ನ, ಹನುಮಾನ್ ಚಾಲೀಸಾ, ಶನಿಮಹಾತ್ಮೆ ಓದಿ.
೧೨. ಮೀನ:
ನಿಯೋಜಿತ ಕಾರ್ಯಗಳು ಅವಧಿಗೆ ಮೊದಲೇ ಮುಗಿಯುವ ಸೂಚನೆ. ಉದ್ಯೋಗದ ವ್ಯಾಪ್ತಿ ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಹೊಸ ಜವಾಬ್ದಾರಿ ನಿರ್ವಹಣೆಯಿಂದ ಗೌರವ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳಿಗೆ ಸಿದ್ಧತೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.