ದಿನ ಭವಿಷ್ಯ
22-10-2025

ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 4
೧. ಮೇಷ:
ಸಮಯ ಪ್ರಜ್ಞೆ ಜಾಗೃತವಾಗಿರುವಂತೆ ನೋಡಿಕೊಂಡು ಮುನ್ನಡೆಯಿರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ಅಧಿಕಾರಿಗಳಿಗೆ ಅಪವಾದದ ಭಯ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಪತ್ರಕರ್ತರಿಗೆ ಸವಾಲಿನ ಕಾರ್ಯ.ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ
೨.ವೃಷಭ:
ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ,ಮಹಾಲಕ್ಷ್ಮಿ ಅಷ್ಟಕ ಓದಿ.
೩.ಮಿಥುನ:
ಬದಲಾದ ಪರಿಸ್ಥಿತಿಯೊಂದಿಗೆ ಹೊಂದಾಣಿಕೆ. ಹೊಸದಾಗಿ ಸೇರ್ಪಡೆಗೊಂಡವರಿಗೆ ಮಾರ್ಗದರ್ಶನ. ಸರಕಾರಿ ನೌಕರರಿಗೆ ಕೊಂಚ ಆತಂಕ. ಅಪರಿಚಿತರೊಂದಿಗೆ ಅಕಾರಣ ಜಗಳ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೪. ಕರ್ಕಾಟಕ:
ಉದ್ಯೋಗಸ್ಥರಿಗೆ ತಕ್ಕಮಟ್ಟಿಗೆ ಅನುಕೂಲದ ಸನ್ನಿವೇಶ. ಉದ್ಯಮಗಳಿಗೆ ಸರಕಾರಿ ನೆರವು ಲಭ್ಯ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫಲ. ಮಹಿಳೆಯರ ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ. ದುಶ್ಚಟಗಳ ವಿರುದ್ಧ ಜನಜಾಗೃತಿ ಅಭಿಯಾನದಲ್ಲಿ ಭಾಗಿ. ಗಣೇಶ ತ್ರಿಶತಿ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಆದಿತ್ಯ ಹೃದಯ ಓದಿ.
೫.ಸಿಂಹ:
ಪರಿಚಯವಿಲ್ಲದ ರಂಗಕ್ಕೆ ಪ್ರವೇಶಿಸಿ ಕೀರ್ತಿ. ಉದ್ಯೋಗಸ್ಥರಿಗೆ ಶ್ಲಾಘನೆಯೊಂದೇ ಪ್ರತಿಫಲ. ಹೊಸ ವ್ಯವಸ್ಥೆಯಲ್ಲಿ ನೌಕರರಿಗೆ ಉತ್ಸಾಹ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಬಂಧು- ಮಿತ್ರರೊಂದಿಗೆ ಸಮಾಗಮ. ಗಣೇಶ ಅಷ್ಟಕ, ವೇದಸಾರ ಶಿವಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೬. ಕನ್ಯಾ:
ಧೈರ್ಯ, ಸ್ಥೈರ್ಯಗಳೊಂದಿಗೆ ಕಾರ್ಯನಿರ್ವಹಣೆ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ ವಿಸ್ತರಣೆ. ಊರಿನ ಹಳೆಯ ವಿದ್ಯಾಲಯಕ್ಕೆ ಹೊಸರೂಪ ನೀಡುವ ಕ್ರಮ. ಉದ್ಯೋಗಾನ್ವೇಷಣೆ ಯಶಸ್ವಿಯಾಗುವ ಭರವಸೆ. ಗಣೇಶ ಪಂಚರತ್ನ, ವಿಶ್ವನಾಥಾಷ್ಟಕ, ಗುರುಸ್ತೋತ್ರ ಓದಿ.
೭.ತುಲಾ:
ಉದ್ಯೋಗಸ್ಥರು ಸವಾಲುಗಳನ್ನು ಎದುರಿಸುವಲ್ಲಿ ಯಶಸ್ವಿ. ಶಿಕ್ಷಿತ ಯುವಕರ ನಿರುದ್ಯೋಗ ನಿವಾರಣೆಗೆ ಪ್ರಯತ್ನ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ.ಹಿರಿಯ ವಿದ್ವಾಂಸರ ಭೇಟಿಯಿಂದ ಆನಂದ. ಗಣಪತಿ ಅಥರ್ವಶೀರ್ಷ, ದಕ್ಚಿಣಾಮೂರ್ತಿ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
೮. ವೃಶ್ಚಿಕ:
ಮನೋಬಲ ವೃದ್ಧಿಯಿಂದ ಕಾರ್ಯಸಿದ್ಧಿ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಅಧ್ಯಾಪಕರಿಗೆ ಹೆಚ್ಚುವರಿ ಕೆಲಸ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ. ಗಣೇಶ ಕವಷ, ದತ್ತಪಂಜರ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
೯. ಧನು:
ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ವ್ಯವಹಾರದ ಸಂಬಂಧ ಪ್ರಯಾಣ ಮುಂದೂಡಿಕೆ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಗಣೇಶ ಕವಚ, ಶಿವ ಕವಚ, ಹನುಮಾನ್ ಚಾಲೀಸಾ ಓದಿ.
೧೦. ಮಕರ:
ಉದ್ಯೋಗಸ್ಥರಿಗೆ ಸತ್ವಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ನಷ್ಟದಿಂದ ಚೇತರಿಸಲು ಉದ್ಯಮಿಗಳ ಪ್ರಯತ್ನ. ಕರಕುಶಲ ಸಾಮಗ್ರಿ ಉದ್ಯಮಿಗಳಿಗೆ ಅನುಕೂಲದ ವಾತಾವರಣ. ಅಲ್ಪಕಾಲಿಕ ಹೂಡಿಕೆ, ಲೇವಾದೇವಿ ವ್ಯವಹಾರ ಬೇಡ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಆಂಜನೇಯ ಸ್ತೋತ್ರ ಓದಿ.
೧೧.ಕುಂಭ:
ನಿರಂತರ ಶ್ರಮ, ದೈವಾನುಗ್ರಹದಿಂದ ಅನುಕೂಲ. ಕೆಲಸ, ಕಾರ್ಯಗಳಲ್ಲಿ ಮುನ್ನಡೆ. ಉದ್ಯೋಗಸ್ಥರಿಗೆ ಅನುಕೂಲ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಶೇರು ಮಾರುಕಟ್ಟೆಯಲ್ಲಿ ಮಧ್ಯಮ ಲಾಭ. ಸಾಹಿತ್ಯ, ಕಲೋಪಾಸನೆಯಲ್ಲಿ ಆಸಕ್ತರಿಗೆ ಹರ್ಷ. ಗಣೇಶ ಕವಚ, ನರಸಿಂಹ ಸ್ತೋತ್ರ, ಶನಿಮಹಾತ್ಮೆ ಓದಿ.
೧೨. ಮೀನ:
ಅನುಕೂಲಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಣೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಜನಹಿತ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಗೃಹೋಪಯೋಗಿ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿ ಮಹಾತ್ಮೆ ಓದಿ.