ದಿನ ಭವಿಷ್ಯ
13-11-2025
ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 4
೧. ಮೇಷ:
ಆವರಿಸಿದ ಆಲಸ್ಯದಿಂದ ಮುಕ್ತರಾಗುವ ಪ್ರಯತ್ನ. ಸಂಸಾರದ ಆವಶ್ಯಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಪ್ರಮುಖ ವ್ಯಕ್ತಿಗಳ ಭೇಟಿ.ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ,ಶನಿಮಹಾತ್ಮೆ ಓದಿ.
೨. ವೃಷಭ:
ಹಲವು ಬಗೆಯ ಕಾರ್ಯಕ್ರಮಗಳ ಒತ್ತಡ. ಉದ್ಯಮ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ವ್ಯವಹಾರಾರ್ಥ ಸಣ್ಣ ಪ್ರಯಾಣ ಸಂಭವ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪಂಚರತ್ನ ಓದಿ.
೩.ಮಿಥುನ:
ಪತ್ರಕರ್ತರಿಗೆ ತರಾತುರಿಯ ದಿನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ. ಆಸ್ಪತ್ರೆ, .ಅನಾಥಾಶ್ರಮಕ್ಕೆ ಭೇಟಿ. ಉದರದ ಆರೋಗ್ಯದ ಕುರಿತು ಎಚ್ಚರ. ಆಪ್ತಸಲಹೆಯ ಮೂಲಕ ಆತ್ಮವಿಶ್ವಾಸ ವೃದ್ಧಿ. ಗಣಪತಿ ಅಥರ್ವಶೀರ್ಷ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
೪.ಕರ್ಕಾಟಕ:
ಬಾಲ್ಯಕಾಲದ ಗುರುಗಳ ಭೇಟಿ. ಗೃಹಿಣಿಯರಿಗೆ ನೆಮ್ಮದಿಯ ದಿನ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ಚಿಂತನೆ. ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೫.ಸಿಂಹ:
ಎಣಿಸದ ರೀತಿಯ ಸುಖ, ಸಂತೋಷ. ಮನದಾಳದ ಪ್ರಾರ್ಥನೆಯಿಂದ ಇಷ್ಟಾರ್ಥಸಿದ್ಧಿ. ವೃತ್ತಿಪರರಿಗೆ ಗುರಿ ಸಾಧನೆಯಲ್ಲಿ ಯಶಸ್ಸು. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ. ಗಣಪತಿ ಅಥರ್ವಶೀರ್ಷ, ಶಿವಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೬. ಕನ್ಯಾ:
ವ್ಯಾಪಾರಿಗಳಿಗೆ ಹೊಸ ಸಪ್ತಾಹದ ಮಧ್ಯದಲ್ಲಿ ಲಾಭ. ವಿದ್ಯಾರ್ಥಿಗಳಿಗೆ ಮನೋರಂಜನೆ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗ ಅರಸುವವರಿಗೆ ಶುಭ ಸಮಾಚಾರ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ಗಣೇಶ ದ್ವಾದಶನಾಮ ಸ್ತೋತ್ರ, ದೇವೀಸ್ತೋತ್ರ, ಗುರುಸ್ತೋತ್ರ ಓದಿ
೭. ತುಲಾ:
ಒಂದರ ಮೇಲೊಂದರಂತೆ ಬಂದುಬೀಳುವ ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಹಿರಿಯರ ಮನೆಯಲ್ಲಿ ಕುಟುಂಬಸ್ಥರ ಭೇಟಿ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ಶನಿಸ್ತೋತ್ರ ಓದಿ.
೮.ವೃಶ್ಚಿಕ:
ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ಪರವೂರಿನಲ್ಲಿರುವ ಮಕ್ಕಳ ಆಗಮನ. ಹಿರಿಯರ ಆರೋಗ್ಯ ಸುಧಾರಣೆ.. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೯.ಧನು:
ದಂಪತಿಗಳ ನಡುವೆ ಅನುರಾಗ ವೃದ್ಧಿ . ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು.ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಕೈಗೊಂಡರೆ ಶುಭ. ಅವಿವಾಹಿತರಿಗೆ ವಿವಾಹ ಯೋಗ. ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
೧೦.ಮಕರ:
ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ದೇವ ಮಂದಿರ ಸಂದರ್ಶನ. ಆಸ್ಪತ್ರೆ ,ಅನಾಥಾಶ್ರಮಗಳಿಗೆ ಭೇಟಿ.
ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧. ಕುಂಭ:
ಸದುದ್ದೇಶಕ್ಕೆ ಸಹಾಯ ಮಾಡಿದ ತೃಪ್ತಿ. ಕುಟುಂಬದ ಕ್ಷೇಮಕ್ಕೆ ಹೊಸ ಯೋಜನೆ. ಸಮಾಜದಲ್ಲಿ ಗೌರವ , ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಮನೆಮಂದಿಗೆ ಆನಂದ. ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
.
೧೨. ಮೀನ:
ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ. ಹಿಂದಿನ ಸಹಚರರ ಭೇಟಿ.ಕೆಲವರಿಗೆ ರಕ್ತದಾನ ಮಾಡುವ ಅವಕಾಶ. ದಂಪತಿಗೆ ನಡುವೆ ಅನುರಾಗ ವೃದ್ಧಿ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಶನಿಮಹಾತ್ಮೆ ಓದಿ.


