ದಿನ ಭವಿಷ್ಯ

13--11-2025

Nov 13, 2025 - 16:54
ದಿನ ಭವಿಷ್ಯ


                 ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ  4

೧. ಮೇಷ: 
 ಆವರಿಸಿದ ಆಲಸ್ಯದಿಂದ ಮುಕ್ತರಾಗುವ ಪ್ರಯತ್ನ. ಸಂಸಾರದ ಆವಶ್ಯಕತೆಗಳತ್ತ ಗಮನ. ಉದ್ಯಮಿಗಳಿಗೆ  ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ  ವ್ಯಾಪಾರಿಗಳಿಗೆ  ಲಾಭ. ಪ್ರಮುಖ ವ್ಯಕ್ತಿಗಳ ಭೇಟಿ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ,ಶನಿಮಹಾತ್ಮೆ ಓದಿ.


೨. ವೃಷಭ:
  ಹಲವು ಬಗೆಯ ಕಾರ್ಯಕ್ರಮಗಳ ಒತ್ತಡ. ಉದ್ಯಮ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ  ವಿವಾಹ ನಿಶ್ಚಯ. ವ್ಯವಹಾರಾರ್ಥ ಸಣ್ಣ ಪ್ರಯಾಣ ಸಂಭವ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪಂಚರತ್ನ ಓದಿ.


೩.ಮಿಥುನ:
  ಪತ್ರಕರ್ತರಿಗೆ ತರಾತುರಿಯ ದಿನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ.ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ. ಉದರದ ಆರೋಗ್ಯದ ಕುರಿತು ಎಚ್ಚರ. ಆಪ್ತಸಲಹೆಯ ಮೂಲಕ ಆತ್ಮವಿಶ್ವಾಸ ವೃದ್ಧಿ. ಗಣಪತಿ ಅಥರ್ವಶೀರ್ಷ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೪.ಕರ್ಕಾಟಕ:
  ಬಾಲ್ಯಕಾಲದ ಗುರುಗಳ ಭೇಟಿ. ಗೃಹಿಣಿಯರಿಗೆ ನೆಮ್ಮದಿಯ ದಿನ.ವ್ಯವಹಾರ ಸಂಬಂಧ   ಸಣ್ಣ  ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ಚಿಂತನೆ.  ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.


೫.ಸಿಂಹ:
 ಎಣಿಸದ ರೀತಿಯ ಸುಖ, ಸಂತೋಷ.  ಮನದಾಳದ ಪ್ರಾರ್ಥನೆಯಿಂದ ಇಷ್ಟಾರ್ಥಸಿದ್ಧಿ.  ವೃತ್ತಿಪರರಿಗೆ ಗುರಿ ಸಾಧನೆಯಲ್ಲಿ ಯಶಸ್ಸು. ಹಿರಿಯರ‌ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ  ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.
ಗಣಪತಿ ಅಥರ್ವಶೀರ್ಷ, ಶಿವಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.


೬. ಕನ್ಯಾ:
   ವ್ಯಾಪಾರಿಗಳಿಗೆ ಹೊಸ ಸಪ್ತಾಹದ ಮಧ್ಯದಲ್ಲಿ ಲಾಭ. .ವಿದ್ಯಾರ್ಥಿಗಳಿಗೆ ಮನೋರಂಜನೆ.. ಕುಶಲ ಕರ್ಮಿಗಳಿಗೆ  ಶೀಘ್ರ ಉದ್ಯೋಗ ಪ್ರಾಪ್ತಿ. .ಉದ್ಯೋಗ ಅರಸುವವರಿಗೆ ಶುಭ ಸಮಾಚಾರ..ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ..ಗಣೇಶ  ‍ದ್ವಾದಶನಾಮ ಸ್ತೋತ್ರ, ದೇವೀಸ್ತೋತ್ರ, ಗುರುಸ್ತೋತ್ರ ಓದಿ

೭. ತುಲಾ:
  ಒಂದರ ಮೇಲೊಂದರಂತೆ ಬಂದುಬೀಳುವ ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ  ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ .ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಹಿರಿಯರ ಮನೆಯಲ್ಲಿ ಕುಟುಂಬಸ್ಥರ ಭೇಟಿ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ಶನಿಸ್ತೋತ್ರ ಓದಿ.
 

೮.ವೃಶ್ಚಿಕ:

 ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ  ಪ್ರಯಾಣ.  ಪರವೂರಿನಲ್ಲಿರುವ ಮಕ್ಕಳ ಆಗಮನ. ಹಿರಿಯರ ಆರೋಗ್ಯ ಸುಧಾರಣೆ.. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೯.ಧನು:
ದಂಪತಿಗಳ ನಡುವೆ ಅನುರಾಗ ವೃದ್ಧಿ ‌. ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ಶಿಕ್ಷಿತರಿಗೆ  ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ   ಕೈಗೊಂಡರೆ ಶುಭ. ಅವಿವಾಹಿತರಿಗೆ ವಿವಾಹ ಯೋಗ.ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೧೦.ಮಕರ:


 ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ . ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ  ಲಾಭ. ದೇವ ಮಂದಿರ ಸಂದರ್ಶನ. ಆಸ್ಪತ್ರೆ ,ಅನಾಥಾಶ್ರಮಗಳಿಗೆ ಭೇಟಿ. 
ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧. ಕುಂಭ:

 ಸದುದ್ದೇಶಕ್ಕೆ ಸಹಾಯ ಮಾಡಿದ ತೃಪ್ತಿ. ಕುಟುಂಬದ ಕ್ಷೇಮಕ್ಕೆ ಹೊಸ ಯೋಜನೆ.  ಸಮಾಜದಲ್ಲಿ ಗೌರವ , ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ,   ಮನೆಮಂದಿಗೆ  ಆನಂದ.ಗಣೇಶ ಸ್ತೋತ್ರ,  ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

೧೨. ಮೀನ: ‌
 ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ. ಹಿಂದಿನ ಸಹಚರರ ಭೇಟಿ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ. ದಂಪತಿಗೆ ನಡುವೆ ಅನುರಾಗ ವೃದ್ಧಿ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.